ಬೆಂಗಳೂರು: ಸಿದ್ದರಾಮಯ್ಯರನ್ನು ಭೇಟಿಯಾದ ವೇಣುಗೋಪಾಲ್

Update: 2018-09-16 05:46 GMT

ಬೆಂಗಳೂರು, ಸೆ.16: ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
 ವಿದೇಶ ಪ್ರವಾಸದಿಂದ ಹಿಂದಿರುಗಿದ ಸಿದ್ದರಾಮಯ್ಯರನ್ನು ಕಾವೇರಿಯಲ್ಲಿ ಭೇಟಿಯಾದ ವೇಣುಗೋಪಾಲ್ ಅವರು ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News