ಶಿವಮೊಗ್ಗ: ಈಜಲು ತೆರಳಿದ ಯುವಕ ನೀರುಪಾಲು

Update: 2018-09-16 17:31 GMT

ಶಿವಮೊಗ್ಗ, ಸೆ. 16: ಕೆರೆಯಲ್ಲಿ ಈಜಾಡಲು ತೆರಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಸಮೀಪದ ಹಾಲ್ಕುಣಿ ಗ್ರಾಮದಲ್ಲಿ ಶನಿವಾರ ನಡೆದಿದೆ. 

ಅದೇ ಗ್ರಾಮದ ಸಂದೇಶ್ (22) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಈಜಾಡುವ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News