ಪಕ್ಕಲಡ್ಕ: ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಧರಣಿ

Update: 2018-09-17 10:50 GMT

ಮಂಗಳೂರು, ಸೆ.17: ಜೆ.ಎಂ. ರೋಡ್‌ನಿಂದ ಪಕ್ಕಲಡ್ಕದ ವರೆಗಿನ ಮುಖ್ಯರಸ್ತೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಹಾಗೂ ಕಾಮಗಾರಿಯನ್ನು ಚುರುಕುಗೊಳಿಸಿ ತ್ವರಿತಗತಿಯಲ್ಲಿ ರಸ್ತೆ ನಿರ್ಮಾಣ ಪೂರ್ಣಗೊಳಿಸಲು ಒತ್ತಾಯಿಸಿ ಡಿವೈಎಫ್‌ಐ ಪಕ್ಕಲಡ್ಕ ಘಟಕದ ನೇತೃತ್ವದಲ್ಲಿಂದು ಧರಣಿ ನಡೆಯಿತು.

ಧರಣಿಯನ್ನು ಉದ್ದೇಶಿಸಿ ಡಿವೈಎಫ್‌ಐ ಮಾಜಿ ಮುಖಂಡ ಸುನೀಲ್ ಕುಮಾರ್ ಬಜಾಲ್ ಮಾತನಾಡಿದರು.

ಧರಣಿಯಲ್ಲಿ ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಪಕ್ಕಲಡ್ಕ ಘಟಕದ ಅಧ್ಯಕ್ಷ ರಿತೇಶ್ ಪಕ್ಕಲಡ್ಕ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ವರಪ್ರಸಾದ್, ಧೀರಜ್, ನಾಗರಾಜ್, ದೀಕ್ಷಿತ್, ಸೋನಿಲ್ ಮುಂತಾದವರು ಭಾಗವಹಿಸಿದ್ದರು.

ಇದೇ ಸಂದರ್ಭ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ನಗರ ಪಾಲಿಕೆಯ ಅಧಿಕಾರಿ ಗಣಪತಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಯಿತು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News