ಐಆರ್ಸಿಟಿಸಿ ಹಣ ವಂಚನೆ ಪ್ರಕರಣ: ಲಾಲೂ ಪ್ರಸಾದ್,ಪತ್ನಿ, ಪುತ್ರನ ವಿರುದ್ಧ ಸಮನ್ಸ್
Update: 2018-09-17 14:14 GMT
ಹೊಸದಿಲ್ಲಿ, ಸೆ.17: ಐಆರ್ಸಿಟಿಸಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ನ್ಯಾಯಾಲಯ ಬಿಹಾರದ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ವಿರುದ್ಧ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಆರೋಪಿಗಳ ವಿರುದ್ಧ ಸಲ್ಲಿಸಲಾಗಿರುವ ದೋಷಾರೋಪಣಾ ಪಟ್ಟಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಅರುಣ್ ಭಾರದ್ವಾಜ್ ಅಕ್ಟೋಬರ್ 6ರ ಒಳಗಾಗಿ ಈ ಮೂವರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮದ ಎರಡು ಹೋಟೆಲ್ಗಳನ್ನು ಖಾಸಗಿ ಸಂಸ್ಥೆಗೆ ನೀಡಿದ ಗುತ್ತಿಗೆಯಲ್ಲಿ ನಡೆದಿರುವ ಅವ್ಯವಹಾರದ ಆರೋಪದ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದ ವೇಳೆ ಈ ಆದೇಶವನ್ನು ನೀಡಿದೆ.