ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು

Update: 2018-09-17 14:34 GMT

ಚಾಮರಾಜನಗರ,ಸೆ.17: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಚಾಮರಾಜನಗರದ ಆದಿಜಾಂಬವ ಜನಾಂಗದ ನಾಗು ಎಂಬವನೇ ಮೃತ ಯುವಕ. ತಮ್ಮ ಬೀದಿಯಲ್ಲಿ ಪ್ರತಿಷ್ಟಾಪಿಸಲಾಗಿದ್ದ ಗಣೇಶನಿಗೆ ಪೂಜೆ ಸಲ್ಲಿಸಿ ಯುವಕರೆಲ್ಲರೂ ಸಂತೋಷದಿಂದ ಕುಣಿಯುತ್ತಿರುವಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಹಠತ್ತಾಗಿ ಕುಸಿದು ಬಿದ್ದಿದ್ದು, ಆತನಿಗೆ ಹೃದಯಘಾತವಾಗಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News