ಹಿಂಬಾಗಿಲ ಮೂಲಕ ಸರಕಾರ ರಚಿಸಲು ಬಿಜೆಪಿ ಯತ್ನ: ಸಂಸದ ಡಿ.ಕೆ.ಸುರೇಶ್

Update: 2018-09-17 14:48 GMT

ಬೆಂಗಳೂರು, ಸೆ.17: ರಾಜ್ಯದ ಬಿಜೆಪಿ ನಾಯಕರು ಹಿಂಬಾಗಿಲ ಮೂಲಕ ಸರಕಾರ ರಚನೆ ಮಾಡಲು ಬಹಳ ವೇಗವಾಗಿ ಮುನ್ನುಗುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಲವು ರಾಜ್ಯಗಳಲಿ ನಮಗೆ ಕಡಿಮೆ ಸ್ಥಾನವಿದ್ದರೂ ನಾವು ಸರಕಾರವನ್ನು ಅಸ್ತಿರಗೊಳಿಸುವ ಕೆಲಸವನ್ನು ಮಾಡಿಲ್ಲ. ಆದರೆ, ಬಿಜೆಪಿಯವರು ಮಾತ್ರ ಅಂತಹ ಕೆಲಸ ಮಾಡುತ್ತಿದ್ದಾರೆ ಎಂದರು.

ನೈತಿಕತೆ, ಸಂಸ್ಕೃತಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ. ಯಾವುದು ರಾಜಧರ್ಮ, ನೈತಿಕತೆ ಎಂಬುದನ್ನು ಬಿಜೆಪಿಯ ಕೇಂದ್ರ ನಾಯಕರು ಈಗ ಹೇಳಲಿ. ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು. ರಾಜ್ಯ ಬಿಜೆಪಿ ನಾಯಕರಿಗೆ ನೈತಿಕತೆಯ ಪಾಠ ಹೇಳಬೇಕು ಎಂದು ಸುರೇಶ್ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News