ಜಯಚಂದ್ರ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಎಸಿಬಿಗೆ ಹೈಕೋರ್ಟ್ ನೋಟಿಸ್
Update: 2018-09-17 16:55 GMT
ಬೆಂಗಳೂರು, ಸೆ.17: ಬ್ಯಾಂಕ್ ಅಕೌಂಟ್ಸ್ಗಳ ಬಿಡುಗಡೆ ಕೋರಿ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಮಾಜಿ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಎಸಿಬಿಗೆ ನೋಟಿಸ್ ಜಾರಿಗೊಳಿಸಿದೆ.
ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಎಸಿಬಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಜಯಚಂದ್ರ ಅವರ ಮನೆ, ಕಚೇರಿ ಮೇಲೆ ದಾಳಿ ನಡೆದು ಎರಡು ವರ್ಷವೇ ಕಳೆದಿವೆ. ಪ್ರಕರಣದ ತನಿಖೆಯೂ ಪೂರ್ಣಗೊಂಡಿದೆ. ಆದರೂ ಬ್ಯಾಂಕ್ ಅಕೌಂಟ್ಸ್ಗಳನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಅಲ್ಲದೆ, ಅಧೀನ ನ್ಯಾಯಾಲಯವೂ ನಮ್ಮ ವಾದವನ್ನು ಪುರಸ್ಕರಿಸದೆ ಏಕಪಕ್ಷೀಯವಾಗಿ ತೀರ್ಪುನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಅಕೌಂಟ್ಸ್ಗಳನ್ನು ಬಿಡುಗಡೆ ಮಾಡಲು ಆದೇಶಿಸಬೇಕೆಂದು ಮನವಿ ಮಾಡಿದರು.