ಶಿವಮೊಗ್ಗ: ಪ್ರತ್ಯೇಕ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

Update: 2018-09-17 18:45 GMT

ಶಿವಮೊಗ್ಗ, ಸೆ. 17: ಶಿವಮೊಗ್ಗ ತಾಲೂಕಿನ ಗ್ರಾಮಾಂತರ ಹಾಗೂ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ವರದಿಯಾಗಿದೆ. 

ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಜಾವಳ್ಳಿ- ಪಿಳ್ಳಂಗಿರಿ ನಡುವಿನ ಅಬ್ಬರಘಟ್ಟ ಕ್ರಾಸ್ ಬಳಿ ರಸ್ತೆ ಬದಿಯ ಚರಂಡಿಗೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೋಪನಾಳ್ ಪ್ರದೇಶದ ನಿವಾಸಿ ಲಕ್ಕೇಶ ಎಂಬಾತ ಸ್ಥಳದಲ್ಲಿಯೇ ಅಸುನೀಗಿದ್ದಾನೆ.

ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಪಂಪ್‍ಹೌಸ್ ಬಳಿ ರಸ್ತೆ ಬದಿ ನಿಂತಿದ್ದ ಹಾಲು ಸಾಗಾಣೆ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಮೀಲ್ ಅಹಮದ್ ಎಂಬುವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News