ಶಿವಮೊಗ್ಗ: ವಿದ್ಯುತ್ ಶಾಕ್ ಗೆ ಬಾಲಕ ಬಲಿ

Update: 2018-09-17 18:47 GMT

ಶಿವಮೊಗ್ಗ, ಸೆ.17: ನಿರ್ಮಾಣ ಹಂತದ ಕಟ್ಟಡದ ಬಳಿ ಆಟವಾಡುತ್ತಿದ್ದ ಬಾಲಕನೋರ್ವನಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಸೀಗೆಬಾಗಿ ಬಡಾವಣೆಯಲ್ಲಿ ನಡೆದಿದೆ. 

ಜುನೇರ್ ಪಾಷ (12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತನ ಜೊತೆ ಆಟವಾಡುತ್ತಿದ್ದ ರಿಯಾನ್ ಮತ್ತು ಗೌಸ್ ಎಂಬ ಬಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಈ ಮೂವರು ಬಾಲಕರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೃತ ಜುನೇರ್ ಪಾಷನ ತಂದೆ ರಿಯಾಜ್ ಪಾಷ ಎಂಬವರಾಗಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News