ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮ್ಮೇಳನ, ಯುನಿಟ್ ಸಮ್ಮೇಳನದ ಲಾಂಛನ ಬಿಡುಗಡೆ

Update: 2018-09-18 04:40 GMT

ಬೆಂಗಳೂರು, ಸೆ.18: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ 'ಯೌವ್ವನ ಮರೆಯಾಗುವ ಮುನ್ನ' ಎಂಬ ಧ್ಯೇಯ ಘೋಷಣೆಯೊಂದಿಗೆ  ಜನವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮಾವೇಶ ಹಾಗೂ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಎಸ್ಸೆಸ್ಸೆಫ್ ಯುನಿಟ್ ಸಮ್ಮೇಳನದ ಲಾಂಛನವನ್ನು ಅಖಿಲ ಭಾರತ ಸುನ್ನೀ ಉಲಮಾ ನಾಯಕ ಎ.ಪಿ.ಅಬೂಬಕರ್ ಮುಸ್ಲಿಯಾರ್ ಬಿಡುಗಡೆಗೊಳಿಸಿದರು.

ಅಕ್ಟೋಬರ್ 10ರಿಂದ 30ರ ತನಕ ರಾಜ್ಯಾದ್ಯಂತ ಸಾವಿರಾರು ಯುನಿಟ್ ಗಳಲ್ಲಿ ಯುವ ಶಕ್ತಿಯನ್ನು ಸಂಘಟಿಸುವ ಮೂಲಕ ಸಭ್ಯ ಸಮಾಜವನ್ನು ರೂಪಿಸಲು ಎಸ್ಸೆಸ್ಸೆಫ್ ಈ  ಸಮ್ಮೇಳನವನ್ನು  ಹಮ್ಮಿಕೊಂಡಿದೆ.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯೀಲ್ ಸಖಾಫಿ ಕೊಡಗು, ಇಹ್ಸಾನ್ ಕರ್ನಾಟಕ ಸಮಿತಿಯ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಬೆಂಗಳೂರು, ಎಸ್.ಎಸ್.ಎ.ಖಾದರ್ ಬೆಂಗಳೂರು, ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು, ಅಬ್ದುಲ್ ರಹಿಮಾನ್ ಮೊಗರ್ಪಣೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News