ಉಡುಪಿ: ಮಹಿಳಾ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

Update: 2018-09-18 12:35 GMT

ಉಡುಪಿ, ಸೆ.18: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ 15ಕ್ಕೂ ಅಧಿಕ ಮಹಿಳೆಯರು ಉಡುಪಿ ಸರ್ವಿಸ್ ಬಸ್ ನಿಲ್ದಾಣವನ್ನು ನೀರು ಹಾಕಿ ಕಸ ಗುಡಿಸಿ ಸ್ವಚ್ಛಗೊಳಿಸುವ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ನಯನ ಗಣೇಶ್, ಪ್ರಧಾನ ಕಾರ್ಯದರ್ಶಿ ವೀಣಾ ಶೆಟ್ಟಿ, ಉಪಾಧ್ಯಕ್ಷೆ ರಮಾ ಲೀಲಾ ಅಮೀನ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರಜಿನಿ ಹೆಬ್ಬಾರ್, ಕಾರ್ಯ ದರ್ಶಿ ದಯಶಿನಿ ಪಂದುಬೆಟ್ಟು, ರೋಹಿಣಿ ಸುಭೇಧ, ಸಂಧ್ಯಾ ರಾವ್, ರಶ್ಮಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News