ಸೆ.19: 'ನಿಮ್ಮ ಮನೆಗೆ ನಮ್ಮ ಪುಸ್ತಕ' ಕಾರ್ಯಕ್ರಮ

Update: 2018-09-18 16:13 GMT

ಬೆಂಗಳೂರು, ಸೆ.18: ಕನ್ನಡ ಪುಸ್ತಕ ಪ್ರಾಧಿಕಾರದ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮವು ಸೆ.19ರಂದು ಸಂಜಯ್ ನಗರದಲ್ಲಿರುವ ಮಾಜಿ ಸಚಿವೆ ಹಾಗೂ ಹಿರಿಯ ಲೇಖಕಿ ಲಲಿತಾ ನಾಯಕ್ ಮನೆಯಂಗಳದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ನ್ಯಾಯಾಂಗ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಕೆ.ಎಸ್.ರಾಮಚಂದ್ರ, ಹಿರಿಯ ಸಾಹಿತಿ ಕೆ.ಎಸ್.ಪಾರ್ಥಸಾರಥಿ, ಡಾ.ಬಿ.ಟಿ.ಲಲಿತಾ ನಾಯಕ್ ಹಾಗೂ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News