ಕಾಂಗ್ರೆಸ್ ಶಾಸಕರು ಯಾವುದೇ ಆಮಿಷಗಳಿಗೆ ಒಳಗಾಗುವುದಿಲ್ಲ: ಶಾಸಕ ಶಾಮನೂರು ಶಿವಶಂಕರಪ್ಪ

Update: 2018-09-18 16:50 GMT

ದಾವಣಗೆರೆ,ಸೆ.18: ಕಾಂಗ್ರೆಸ್ಸಿನ ಎಲ್ಲಾ ಶಾಸಕರೂ ಬಿಗಿಯಾಗಿದ್ದು, ಯಾರನ್ನೂ ರೆಸಾರ್ಟ್‍ಗೆ ಕರೆದೊಯ್ಯುವ ಅಗತ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಆಪರೇಷನ್, ಗೀಪರೇಷನ್ ಏನೂ ನಮ್ಮ ಪಕ್ಷದ ಮೇಲೆ ನಡೆಯುವುದಿಲ್ಲ. ಕಾಂಗ್ರೆಸ್ಸಿನ ಯಾವೊಬ್ಬ ಶಾಸಕರೂ ಎದುರಾಳಿಗಳ ಇಂತಹ ಆಮಿಷಗಳಿಗೆ ಒಳಗಾಗುವುದಿಲ್ಲ. ಕಾಂಗ್ರೆಸ್ಸಿನ ಎಲ್ಲಾ ಶಾಸಕರೂ ಬಿಗಿಯಾಗಿದ್ದು, ಸರ್ಕಾರವೂ ಸುಭದ್ರವಾಗಿರಲಿದೆ ಎಂದು ಅವರು ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಐದು ವರ್ಷ ಅಧಿಕಾರಾವದಿ ಪೂರ್ಣಗೊಳಿಸಲಿದ್ದು, ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ತೊರೆಯುವುದಿಲ್ಲ. ಈ ಬಗ್ಗೆ ಯಾವುದೇ ಅನುಮಾನವೂ ಬೇಡ ಎಂದರು. ಕಾಂಗ್ರೆಸ್ಸಿನ ಬಗ್ಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ಮಾಡಿದ ಮಾತ್ರಕ್ಕೆ ಬೆಲೆ ಕೊಡಬೇಕಾ? ರೇಣುಕಾಚಾರ್ಯನನ್ನು ಆಕೆಯ ಜೊತೆಗೆ ಕಳಿಸಿ ಎಂಬುದಾಗಿ ಮಾಜಿ ನರ್ಸ್‍ವೊಬ್ಬರ ಹೆಸರನ್ನು ಪ್ರಸ್ತಾಪಿಸದೇ ಅವರು ವ್ಯಂಗ್ಯವಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News