ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2018-09-18 16:53 GMT

ಗಂಗೊಳ್ಳಿ, ಸೆ.18: ವೈಯಕ್ತಿಕ ಕಾರಣದಿಂದ ಸೆ.17ರಂದು ರಾತ್ರಿ 10:30ಕ್ಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುಜ್ಜಾಡಿ ಗ್ರಾಮದ ಗರಡಿಹಿತ್ಲು ನಿವಾಸಿ ಸೀತು ಪೂಜಾರ್ತಿ(75) ಎಂಬವರು ರಾತ್ರಿ 11:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕಿಟ್ಟಣ್ಣ ಶೆಟ್ಟಿ ಎಂಬವರ ಮಗಳು ವಿಜಯಲಕ್ಷ್ಮಿ(34) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.17 ರಂದು ರಾತ್ರಿ ವೇಳೆ ಎಲ್ಲೂರು ಗ್ರಾಮದ ಕುಂಜೂರಿನಲ್ಲಿರುವ ತಂದೆ ಮನೆ ಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ವೈಯಕ್ತಿಕ ಕಾರಣದಿಂದ ಮನನೊಂದ ವರಂಗ ಪೇಟೆಯ ಪದ್ಮನಾಭ ಆಚಾರ್ಯ(65) ಎಂಬವರು ಸೆ.17ರಂದು ರಾತ್ರಿ ವೇಳೆ ಮನೆಯ ಸಮೀಪದ ಕಟ್ಟಿಗೆ ಹಾಕುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News