ಮೈತ್ರಿ ಸರ್ಕಾರ ಬೀಳಲಿದೆ ಎಂಬುದು ಬಿಜೆಪಿ ನಾಯಕರ ಭ್ರಮೆ: ಮಾಜಿ ಸಚಿವ ಸಿ.ಎಚ್.ವಿಜಯಶಂಕರ್

Update: 2018-09-18 17:35 GMT

ಮೈಸೂರು,ಸೆ.18: ಮೈತ್ರಿ ಸರ್ಕಾರ ಬೀಳಲಿದೆ ಎಂಬುದು ಬಿಜೆಪಿ ನಾಯಕರ ಭ್ರಮೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಂತಹ ಬೆಳವಣಿಗೆ ಆಗಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿಜಯಶಂಕರ್ ಹೇಳಿದರು.

ಮೈಸೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಭ್ರಮಾಲೋಕದಲ್ಲಿ ಇದ್ದಾರೆ. ಅದೆಲ್ಲವೂ ಹುಸಿ, ಠುಸ್ ಅನ್ನೋದು ಅವರಿಗೆ ಗೊತ್ತಾಗಲಿದೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಮೈತ್ರಿ ಸರ್ಕಾರ ನಡೆಸುವಾಗ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಹಾಗೆಂದ ಮಾತ್ರಕ್ಕೆ ಬಗೆಹರಿಯದ ಸಮಸ್ಯೆಗಳು ಯಾವುದೂ ಇಲ್ಲ. ನಮ್ಮಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದೆ ಎಂದಿದ್ದಾರೆ.

ಈ ಸಮಸ್ಯೆ ಬಗೆಹರಿಸುವ ನಾಯಕತ್ವ ಹಾಗೂ ಮುಖ್ಯಸ್ಥರು ನಮ್ಮಲ್ಲಿ ಇದ್ದಾರೆ. ಸರ್ಕಾರ ಬೀಳತ್ತೆ ಎಂಬುದು ಕೇವಲ ಊಹಾಪೋಹ. ನನಗಿರುವ ಮಾಹಿತಿ ಹಾಗೂ ಅನುಭವದ ಪ್ರಕಾರ ಒಂದೆರಡು ದಿನದಲ್ಲಿ ಎಲ್ಲ ಸಮಸ್ಯೆ ನಿವಾರಣೆ ಆಗಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News