ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಕೊಲೆ

Update: 2018-09-19 14:43 GMT

ಬೆಂಗಳೂರು, ಸೆ.19: ಗಾರೆ ಕೆಲಸದ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಅಟ್ಟೂರು ಲೇಔಟ್ ಸಮೀಪದ ವೀರ ಸಾಗರದ ಬಳಿ ನಡೆದಿದೆ ಎಂದು ವರದಿಯಾಗಿದೆ.

ಸಗೈರಾಜ್(29) ಎಂಬಾತ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಅಟ್ಟೂರು ಲೇಔಟ್ ಬಳಿಯ ಸಗೈರಾಜ್ ಗಾರೆ ಕೆಲಸ ನಿರ್ವಹಿಸುತ್ತಾ ಜೀವನ ನಡೆಸುತ್ತಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ಸಗೈರಾಜ್‌ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಯಲಹಂಕ ಉಪನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News