ಮಂಡ್ಯ: ನದಿಯಲ್ಲಿ ಮುಳುಗಿ ಯುವಕ ಮೃತ್ಯು

Update: 2018-09-19 17:57 GMT

ಮಂಡ್ಯ, ಸೆ.19: ಎಮ್ಮೆ ಮೈ ತೊಳೆಯಲು ಹೋಗಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.

ಬೆಳತೂರು ಗ್ರಾಮದ ಲೋಕೇಶ್(19) ಮೃತ ಯುವಕ. ಈತ ಎಮ್ಮೆಯ ಮೈ ತೊಳೆಯಲು ಶಿಂಷಾ ನದಿಗೆ ಇಳಿದಿದ್ದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋದನೆನ್ನಲಾಗಿದೆ.

ಅಗ್ನಿ ಶಾಮಕ ಸಿಬ್ಬಂದಿಯ ಸಹಾಯದಿಂದ ಶವವನ್ನು ಹೊರ ತೆಗೆದು ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News