ಶಿವಮೊಗ್ಗ: ಸೆ.25 ಕ್ಕೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ, ಜನತಾದರ್ಶನ ಕಾರ್ಯಕ್ರಮ

Update: 2018-09-19 18:06 GMT

ಶಿವಮೊಗ್ಗ,ಸೆ.19: ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಸೆಪ್ಟಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಸೊರಬ ತಾಲೂಕು ಆನವಟ್ಟಿ ಹೋಬಳಿಯ ಬಾರಂಗಿ ಹಾಗೂ ಅಂದು ಮಧ್ಯಾಹ್ನ 3.30ಕ್ಕೆ ತೊರವಂದ ಗ್ರಾಮದಲ್ಲಿ ಸಾರ್ವಜನಿಕ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಜನತಾ ದರ್ಶನದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿರುವರು. ಜನತಾ ದರ್ಶನದಲ್ಲಿ ಸ್ವೀಕರಿಸಲಾಗುವ ಎಲ್ಲಾ ಮನವಿಗಳನ್ನು ಆಯಾ ದಿನದಂದೇ ವಿಲೇ ಮಾಡಲು ಪ್ರಥಮ ಆದ್ಯತೆಯನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಪ್ರಯುಕ್ತ ಸಾರ್ವಜನಿಕರು ಜನತಾದರ್ಶನ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News