ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2018-09-20 14:01 GMT

ಬೆಂಗಳೂರು, ಸೆ.20: ರಾಜ್ಯ ಸರಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರಣಕ್ಕಾಗಿ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬಿಎಂಟಿಸಿ ನಿರ್ದೇಶಕ(ಮಾಹಿತಿ ತಂತ್ರಜ್ಞಾನ)-ತನುಶ್ರೀ ದೇಬ್ ಬರ್ಮಾ, ಬೆಳಗಾವಿ ಜಿಲ್ಲಾಧಿಕಾರಿ-ಡಾ.ಎಸ್.ಬಿ.ಬೊಮ್ಮನಹಳ್ಳಿ, ಚಿತ್ರದುರ್ಗ ಜಿಲ್ಲಾಧಿಕಾರಿ-ಆರ್.ಗಿರೀಶ್, ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಡಾ.ಬಿ.ಸಿ.ಸತೀಶ್.

ಜವಳಿ ಅಭಿವೃದ್ಧಿ ಆಯುಕ್ತ ಹಾಗೂ ಕೈ ಮಗ್ಗ ಜವಳಿ ಇಲಾಖೆಯ ನಿರ್ದೇಶಕ-ಡಾ.ಎಂ.ಆರ್.ರವಿ, ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಕವಿತಾ ಎಸ್.ಮಣ್ಣೀಕೇರಿ, ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಮಹಾಂತೇಶ್ ಬೀಳಗಿ.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಕೆ.ಶಿವರಾಮೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಡಾ.ಆರ್.ಸೆಲ್ವಮಣಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಕೆ.ಎನ್.ರಮೇಶ್‌ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News