ನಾವು ಮುಂಬೈಗೆ ಹೋಗಿಲ್ಲ, ಇಲ್ಲೇ ಇದ್ದೇವೆ: ಕಾಂಗ್ರೆಸ್ ಶಾಸಕ ನಾಗೇಂದ್ರ

Update: 2018-09-20 14:07 GMT

ಬೆಂಗಳೂರು, ಸೆ. 20: ‘ನಮ್ಮನ್ನು ಯಾರೂ ಭೇಟಿ ಮಾಡಿಲ್ಲ. ಬಿಜೆಪಿಯ ಯಾವ ನಾಯಕರೂ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಮುಂಬೈಗೂ ಹೋಗೋದಿಲ್ಲ’ ಎಂದು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾವು ಮುಂಬೈಗೆ ಹೋಗಿದ್ದೇವೆಂದು ಮಾಧ್ಯಮಗಳಲ್ಲಿ ಬರುತ್ತಿರುವುದು ಶುದ್ಧ ಸುಳ್ಳು. ನಾವು ಯಾವುದೇ ಕಾರಣಕ್ಕೂ, ಯಾವುದೇ ಸಂದರ್ಭದಲ್ಲಿಯೂ ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಣೆ ನೀಡಿದರು.

ಪಕ್ಷದ ತೀರ್ಮಾನಕ್ಕೆ ಬದ್ಧ: ಬಳ್ಳಾರಿ ಜಿಲ್ಲೆಯಲ್ಲಿ ಸಚಿವ ಸ್ಥಾನದ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ಗಣೇಶ್, ಆನಂದ್‌ಸಿಂಗ್ ಅಥವಾ ಈ.ತುಕಾರಾಂ ಸೇರಿದಂತೆ ಯಾರಿಗೆ ಸಚಿವ ಸ್ಥಾನ ನೀಡಿದರೂ ಸಂತೋಷ. ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದರು.

ನಾವು ಎಲ್ಲೂ ಹೋಗಿಲ್ಲ..

‘ನಾವು ಎಲ್ಲ ಇಲ್ಲೇ ಇದ್ದೇವೆ. ಯಾರೂ ಮುಂಬೈಗೆ ಹೋಗಿಲ್ಲ. ಪಕ್ಷದ ವಿಚಾರ ಸಂಬಂಧ ನಮಗೆ ಯಾವುದೇ ಅಸಮಾಧಾನವೂ ಇಲ್ಲ. ನಾವೆಲ್ಲರೂ ಸಮಾಧಾನವಾಗಿ ಇದ್ದೇವೆ. ಪಕ್ಷದಲ್ಲಿನ ಸಮಸ್ಯೆಗಳನ್ನು ಹೈಕಮಾಂಡ್ ಬಗೆಹರಿಸಲಿದೆ. ಆದರೆ, ಮಾಧ್ಯಮಗಳ ಮಸಾಲೆ ಸುದ್ದಿಗೆ ನಾವು ಹೊಣೆಯಲ್ಲ’

-ರಮೇಶ್ ಜಾರಕಿಹೊಳಿ, ಪೌರಾಡಳಿತ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News