ಬಾಲಕಿಯ ಅತ್ಯಾಚಾರ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಸ್ಐಒ ಮನವಿ
Update: 2018-09-20 18:01 GMT
ಮಂಗಳೂರು, ಸೆ.20: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನಬಳಿಯಲ್ಲಿ ಎಂಟರ ಹರೆಯದ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಬೇಕು ಎಂದು ಆಗ್ರಹಿಸಿ ಎಸ್ಐಒ ದ.ಕ. ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದೆ.
ಈ ಸಂದರ್ಭ ಎಸ್ಐ ದ.ಕ. ಜಿಲ್ಲಾಧ್ಯಕ್ಷ ಅಹ್ಮದ್ ಮುಬೀನ್, ಕಾರ್ಯದರ್ಶಿ ಇರ್ಷಾದ್ ವೇಣೂರು ಉಪಸ್ಥಿತರಿದ್ದರು.