ಸೆ.24: ಮರಳು ಸಮಸ್ಯೆ ಕುರಿತು ಬೆಂಗಳೂರಿನಲ್ಲಿ ಸಭೆ

Update: 2018-09-20 18:42 GMT

ಮಂಗಳೂರು,ಸೆ.20:ದ.ಕ. ಮತ್ತು ಉಡುಪಿ ಜಿಲ್ಲೆಗಳ ಮರಳು ಸಮಸ್ಯೆ ಮತ್ತು ಭೂಪರಿವರ್ತನೆ ಸಂಬಂಧಿಸಿದ ಸಭೆಯು ಸೆ.24ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.

ಸಭೆಗೆ ಪೂರ್ವಭಾವಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ರಾಜಶೇಖರ್ ಪಾಟೀಲ್ ಅಂದು ಅಪರಾಹ್ನ 2 ಗಂಟೆಗೆ ವಿಶೇಷ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಕರಾವಳಿಯ ಮರಳು ಸಮಸ್ಯೆಗೆ ಪರಿಹಾರ ಕಂಡುಹುಡುಕಲು ಸಭೆ ನಡೆಸಲು ತಾನು ಮುಖ್ಯಮಂತ್ರಿಗಳನ್ನು ವಿನಂತಿಸಿದ್ದು, ಅದರಂತೆ ಈ ಸಭೆ ಏರ್ಪಡಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಕೆಡಿಪಿ ಸಭೆ ಮುಂದೂಡಿಕೆ: ಮುಖ್ಯಮಂತ್ರಿಗಳ ಸಭೆಯ ಹಿನ್ನೆಲೆಯಲ್ಲಿ ಸೆ.24ರಂದು ಮಂಗಳೂರಿನಲ್ಲಿ ನಿಗದಿಯಾಗಿದ್ದ ತ್ರ್ತ್ರೈಮಾಸಿಕ ಕೆಡಿಪಿ ಸಭೆಯನ್ನು ಸೆ.26ಕ್ಕೆ ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
.......

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News