ಕುಡಿದ ಮತ್ತಿನಲ್ಲಿ ಅಸಭ್ಯ ವರ್ತನೆ : ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

Update: 2018-09-20 18:48 GMT

ಭಟ್ಕಳ, ಸೆ.20: ಕುಡಿದ ಅಮಲಿನಲ್ಲಿ ಭಟ್ಕಳದ ಮಹಿಳೆಯರಿದ್ದ ಕಾರನ್ನು ಹಿಮ್ಮೆಟ್ಟಿಸಿಕೊಂಡು ಬಂದು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಭಟ್ಕಳ ನಗರ ಠಾಣೆಯ ಪೊಲೀಸರು ಮಂಗಳೂರು ಮೂಲದ ನಾಲ್ವರನ್ನು ವಶಪಡೆದುಕೊಂಡ ಬುಧವಾರ ರಾತ್ರಿ ನಡೆದಿದೆ.

ಇಲ್ಲಿನ ಮುಷ್ತಾಕ್ ಅಹ್ಮದ್ ಎಂಬವರು ತಮ್ಮ ಕುಟುಂಬದೊಂದಿಗೆ ಕುಂದಾಪುರದಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುವಾಗ ಬೈಂದೂರು ಬಳಿ ಕುಡಿದ ಮತ್ತಿನಲ್ಲಿನದ್ದ ಯುವಕರ ಕಾರೊಂದು ತಮ್ಮ ಕಾರನ್ನು ಹಿಂಬಾಲಿಸಿಕೊಂಡು ಅಡ್ಡಾದಿಡ್ಡಿಯಾಗಿ ಚಲಿಸಿಕೊಂಡು ಬರುತ್ತಿದ್ದು ಕಾರಿನಲ್ಲಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರಿನಿಂದ ಜೋಗಫಾಲ್ಸ್‌ಗೆ ಹೋಗುತ್ತಿದ್ದ ನಾಲ್ವರು ಯುವಕರು ಕುಡಿದ ಅಮಲಿನಲ್ಲಿ ಎರಡು ಮೂರು ಕಡೆ ರಸ್ತೆಯಲ್ಲಿ ಬೈಕ್‌ಗೆ ಅಪಘಾತ ಮಾಡಿಕೊಂಡ್ತಿದ್ದರು ಎನ್ನಲಾಗಿದ್ದು ಮುಷ್ತಾಕ್‌ರ ಕಾರನ್ನು ಹಿಂಬಾಲಿಸಿಕೊಂಡ ಭಟ್ಕಳದವರೆಗೆ ಬಂದ ಯುವಕರನ್ನು ಇಲ್ಲಿನ ಪಿ.ಎಲ್.ಡಿ. ಬ್ಯಾಂಕ್ ಬಳಿ ಅಡ್ಡಗಟ್ಟಿ ನಿಲ್ಲಿದ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ವರನ್ನು ವಶಕ್ಕೆ ಪಡೆದುಕೊಂಡ ನಗರ ಠಾಣೆಯ ಪೊಲೀಸರು ಯುವಕರನ್ನು ವಿಚಾರಿಸಿ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ತಂಝಿಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಹಾಗೂ ಕಾರ್ಯದರ್ಶಿ ಮೌಲಾನ ಯಾಸಿರ್ ಬರ್ಮಾವರ್ ನದ್ವಿ ಪೊಲೀಸ್ ಠಾಣೆಗೆ ತೆರಳಿ ಅಲ್ಲಿ ಗುಂಪುಗೂಡಿದ ಜನರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಎದುರು ಸೇರಿದ ಸಾರ್ವಜನಿಕರು ಅಲ್ಲಿಂದ ತೆರಳಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News