ಸೋಮವಾರದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು: ಮೇಯರ್ ಸಂಪತ್‌ರಾಜ್

Update: 2018-09-21 14:32 GMT

ಬೆಂಗಳೂರು, ಸೆ.21: ಬೆಂಗಳೂರು ನಗರದ ರಸ್ತೆಗಳಲ್ಲಿರುವ ಎಲ್ಲ ಗುಂಡಿಗಳನ್ನು ಮುಂದಿನ ಸೋಮವಾರದೊಳಗೆ ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಮೇಯರ್ ಸಂಪತ್‌ರಾಜ್ ತಿಳಿಸಿದರು.

ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ಅಪಘಾತಗಳಾಗಿ ಸಾವು-ನೋವು ಸಂಭವಿಸುತ್ತಿವೆ. ಹೀಗಾಗಿ ಕೂಡಲೆ ಎಲ್ಲ ಗುಂಡಿಗಳನ್ನು ಮುಚ್ಚಬೇಕೆಂದು ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮೇಯರ್ ನೇತೃತ್ವದಲ್ಲಿ ನಗರದ ಎಂಜಿ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.

ಈ ವೇಳೆ ಮಾತನಾಡಿದ ಮೇಯರ್, ಮುಂದಿನ ಸೋಮವಾರದೊಳಗೆ ನಗರದ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಲು ನಿರಂತರವಾಗಿ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಆಗಾಗ ರಸ್ತೆಗಳನ್ನು ಪರಿಶೀಲಿಸಿ, ರಸ್ತೆಗಳಲ್ಲಾಗುವ ಗುಂಡಿಗಳನ್ನು ಕೂಡಲೆ ಮುಚ್ಚುವಂತಹ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News