ಐಐಟಿ ಸಂಶೋಧನಾ ವಿದ್ಯಾರ್ಥಿ ನೇಣಿಗೆ ಶರಣು

Update: 2018-09-21 17:40 GMT

ರಾಂಚಿ, ಸೆ. 21: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಶುಕ್ರವಾರ ಐಐಟಿ-ಐಎಸ್‌ಎಂನ ಸಂಶೋಧನಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ಉತ್ತರಪ್ರದೇಶದ ಮೊರದಾಬಾದ್ ಜಿಲ್ಲೆಯ ನಿವಾಸಿ ರಂಜನ್ ಸೇಥೆ ಆತ್ಯಹತ್ಯೆ ಮಾಡಿಕೊಂಡ ವ್ಯಕ್ತಿ. ರಥಿ ಅವರು ಹಾಸ್ಟೆಲ್‌ನ ಕೊಠಡಿಯಲ್ಲಿ ಒಬ್ಬರೇ ಇದ್ದರು. ಅವರ ಸಹವಾಸಿ ಮನೆಗೆ ತೆರಳಿದ್ದರು. ಈ ಸಂದರ್ಭ ರಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ರಥಿ ಅವರ ಕೊಠಡಿಯ ಬಾಗಿಲು ತೆರೆದಿತ್ತು ಹಾಗೂ ಅವರ ಮೃತದೇಹ ಫ್ಯಾನ್‌ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News