ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಬಾಲಕಿಗೆ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿಗೆ ಎಸ್‍ಡಿಪಿಐ ನಿಯೋಗ ಮನವಿ

Update: 2018-09-22 13:06 GMT

ಬಂಟ್ವಾಳ, ಸೆ. 22: ಗೂಡಿನಬಳಿಯ ಸಂತ್ರಸ್ತ ಬಾಲಕಿಗೆ ಸರಕಾರದಿಂದ ಪರಿಹಾರವನ್ನು ಒದಗಿಸುವಂತೆ ಎಸ್ಡಿಪಿಐ ನಿಯೋಗವು ಶನಿವಾರ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಭೇಟಿ ಮಾಡಿ ಮನವಿ ಮಾಡಿತು.

ಬಾಲಕಿಯ ಮೇಲೆ ದುಷ್ಕರ್ಮಿಗಳು ನಡೆಸಿರುವ ಅತ್ಯಾಚಾರ ಪ್ರಕರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ತೀರ್ವವಾಗಿ ಖಂಡಿಸಿದೆ. ಮಹಿಳೆಯರು ಸಮಾಜದ ಎಲ್ಲ ರಂಗದಲ್ಲಿ ಮುಂದೆ ಬರುತ್ತಿರುವ ಈ ಕಾಲದಲ್ಲಿ, ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರವುದು, ಅದರಲ್ಲೂ ಎಳೆ ವಯಸಿನ  ಮಕ್ಕಳು ಇಂತಹ ದುಷ್ಕರ್ಮಿಗಳ ದಾಳಿಗೆ ತುತ್ತಾಗುತ್ತಿರುವುದು ಖೇದಕರ ಸಂಗತಿ. ಇಂತಹ ಘಟನೆಗಳಿಂದ ನಾಗರಿಕ ಸಮಾಜವು ತಲೆತಗ್ಗಿಸುವಂತಾಗಿದೆ. ಸಂತ್ರಸ್ತೆಗೆ ಬಾಲಕಿಗೆ ಸೂಕ್ತ ಪರಿಹಾರ ಮತ್ತು ಕಾನೂನು ನೆರವನ್ನು ನೀಡುವಂತೆ ಒತ್ತಾಯಿಸಿ ಮನವಿ ಮಾಡಿತು.

ನಿಯೋಗದಲ್ಲಿ ದ.ಕ. ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಮುನೀಶ್ ಆಲಿ, ಪಿಎಫ್‍ಐ ಬಂಟ್ವಾಳ ಡಿವಿಷನ್ ಅಧ್ಯಕ್ಷ ರಹಿಮಾನ್ ಗೂಡಿನಬಳಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News