ಉಡುಪಿ ವೃತ್ತಮಟ್ಟದ ಕ್ರೀಡಾಕೂಟ: ಸೈಂಟ್ ಸಿಸಿಲಿ ಚಾಂಪಿಯನ್

Update: 2018-09-22 14:27 GMT

ಉಡುಪಿ, ಸೆ.22: ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ವಲಯ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಆಶ್ರಯದಲ್ಲಿ ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಉಡುಪಿ ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆ ತಂಡ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿತು.

ಕ್ರೀಡಾಕೂಟದಲ್ಲಿ ಮಲ್ಪೆಯ ಗಾಂಧಿ ಶತಾಬ್ದಿ ಹಿರಿಯ ಪ್ರಾಥಮಿಕ ಶಾಲೆಯ ಅಬೂಬಕ್ಕರ್ ಹಾಗೂ ಸೈಂಟ್ ಸಿಸಿಲಿ ಕ್ಸೇವಿಯರ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ತೃಷಾ ಬಾಲಕರ ಹಾಗೂ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳನ್ನು ಗೆದ್ದುಕೊಂಡರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಮಧುಕರ್ ಮಾತ ನಾಡಿದರು. ಅಧ್ಯಕ್ಷತೆಯನ್ನು ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಉದ್ಯಾವರ ನಾಗೇಶ್ ಕುಮಾರ್ ವಹಿಸಿದ್ದರು.

ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕ ಆಲ್ವಿನ್ ಅಂದ್ರಾದೆ, ಹಿಂದೂ ಶಾಲಾ ಪಿಟಿಎ ಅಧ್ಯಕ್ಷ ಯು.ಆರ್. ಚಂದ್ರಶೇಖರ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಣೇಶ್ ಕುಮಾರ್ ಉಪಸ್ಥಿತರಿದ್ದರು.

ಹಿಂದೂ ಶಾಲಾ ಮುಖ್ಯೋಪಾಧ್ಯಾಯ ಗಣಪತಿ ಕಾರಂತ್ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಕೃಷ್ಣಕುಮಾರ್ ರಾವ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಸ್.ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News