ಉಡುಪಿ: 24ಕ್ಕೆ ಸ್ವಚ್ಛಭಾರತ ಅಭಿಯಾನ
Update: 2018-09-22 15:15 GMT
ಉಡುಪಿ, ಸೆ. 22: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮತ್ತು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಸೆ.24ರ ಸೋಮವಾರ ಸ್ವಚ್ಛಭಾರತ ಆಭಿಯಾನ ನಡೆಯಲಿದೆ.
ನಗರದ ಭುಜಂಗಪಾರ್ಕ್ ಪರಿಸರದಲ್ಲಿ ಬೆಳಗ್ಗೆ 9 ಕ್ಕೆ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ನೂರಾರು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಕಾಲೇಜು ಪ್ರಾದ್ಯಾಪಕರ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಲಿದೆ. ಇದರೊಂದಿಗೆ ಪರಿಸರ ಸ್ವಚ್ಛತೆಯ ಬಗ್ಗೆ ವಿದ್ಯಾಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯವೂ ನಡೆಯಲಿದೆ ಎಂದು ಫೆಡರೇಷನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.