ಗಾಂಜಾ ಸೇವನೆ: ಮೂವರು ವಿದ್ಯಾರ್ಥಿಗಳು ವಶಕ್ಕೆ

Update: 2018-09-22 15:23 GMT

ಮಣಿಪಾಲ, ಸೆ. 22: ಗಾಂಜಾ ಸೇವಿಸುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಸರಳಬೆಟ್ಟು ಸಮೀಪ ಸೆ.19ರಂದು ಸಂಜೆ ವೇಳೆ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಣಿಪಾಲ ವಿದ್ಯಾರ್ಥಿಗಳಾದ ಬಿ.ಸಾತ್ವಿಕ್(19), ದೀಪಕ್ ಭಾರ್ಗವ್ ರಾವ್, ಅತುಲ್ಯ ಸಿಂಗ್(18) ಎಂಬವರನ್ನು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ಸ್ ವಿಭಾಗದ ಮುಂದೆ ಹಾಜರುಪಡಿಸಿದ್ದು ಅವರನ್ನು ಪರೀಕ್ಷಿಸಿದ ವೈದ್ಯರು ಇವೆಲ್ಲರು ಗಾಂಜಾ ಸೇವಿಸಿರುವುದಾಗಿ ದೃಢ ಪತ್ರ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News