ಬೆಂಗಳೂರು: ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಳವು

Update: 2018-09-23 15:05 GMT

ಬೆಂಗಳೂರು, ಸೆ.23: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರ ಕಳವು ಮಾಡಿರುವ ಆರೋಪ ಸಂಬಂಧ ಇಲ್ಲಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಆರ್‌ಪುರಂನ ವೀರಣ್ಣ ಕೆರೆ ಸುೀಪದ ನಿವಾಸಿ ಮಲಾಬಾಯಿ ಚಿನ್ನದ ಸರ ಕಳೆದುಕೊಂಡ ಮಹಿಳೆ ಎಂದು ತಿಳಿದುಬಂದಿದೆ.

ಶನಿವಾರ ಸಂಜೆ ಮನೆ ಸಮೀಪದ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ಮನೆ ಬಂದು ನೋಡಿದಾಗ ಕತ್ತಿನಲ್ಲಿದ್ದ ಸರ ಕಳವಾಗಿರುವುದು ಬೆಳಕಿಗೆ ಬಂದಿದೆ.

ಸರ ಕತ್ತಿನಿಂದ ಬಿದ್ದುಹೋಗಿದೆಯೋ ಅಥವಾ ಯಾರಾದರೂ ಕಳ್ಳರು ಅದನ್ನು ಕಿತ್ತುಕೊಂಡು ಹೋಗಿದ್ದಾರೋ ಎಂಬುದು ತಿಳಿದುಬಂದಿಲ್ಲ. ಈ ಬಗ್ಗೆ ನೀಡಿದ ದೂರಿನನ್ವಯ ಕೆ.ಆರ್.ಪುರಂ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News