ಡಿಸಿಪಿ ಹನುಮಂತರಾಯರ ವರ್ಗಾವಣೆ ರದ್ದು

Update: 2018-09-23 17:56 GMT

ಮಂಗಳೂರು, ಸೆ.23: ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಹನುಮಂತರಾಯ ಅವರ ವರ್ಗಾವಣೆಯನ್ನು ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಹನುಮಂತರಾಯ ಅವರನ್ನು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಿ ಆದೇಶಿಸಲಾಗಿತ್ತು. ಇದೀಗ ಆ ವರ್ಗಾವಣೆಯನ್ನು ರದ್ದುಗೊಳಿಸಿರುವ ಸರಕಾರ ಹಾಲಿ ಸ್ಥಾನದಲ್ಲೇ ಮುಂದುವರಿಸಲು ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News