ಈದು: ಅ.2ರಂದು ಅರ್ಹ ಫಲಾನುಭವಿಗಳ ಅರ್ಜಿ ಸ್ವೀಕಾರ

Update: 2018-09-24 04:48 GMT

ಕಾರ್ಕಳ, ಸೆ.24: ಈದು ಗ್ರಾಮ ಪಂಚಾಯತ್ ಮತ್ತು ಹೊಸ್ಮಾರುವಿನ ಸ್ವಾಮಿ ವಿವೇಕಾನಂದ ಯುವಕ ಮಂಡಲಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಯಡಿ ಮಾಸಿಕ ಪಿಂಚಣಿಗಾಗಿ ಸಾಮೂಹಿಕ ಅರ್ಜಿ ಸ್ವೀಕಾರ ಕಾರ್ಯಕ್ರಮ ಹಾಗೂ ಕಟ್ಟಡ ಕಾರ್ಮಿಕರ ಕಲ್ಯಾಣ ಇಲಾಖೆಗೆ ಕಾರ್ಮಿಕರ ನೋಂದಣಿ ಕಾರ್ಯಕ್ರಮವು ಅಕ್ಟೋಬರ್ 2ರಂದು ಈದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. 

ಈದು ನೂರಾಳ್‍ಬೆಟ್ಟು ಗ್ರಾಮಗಳ 60 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳು ಪಿಂಚಣಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರಾಷ್ಟ್ರೀಕೃತ ಬ್ಯಾಂಕಿನ ಪಾಸ್‍ಬುಕ್‍ಗಳ ಝೆರಾಕ್ಸ್ ಪ್ರತಿಗಳ ಜೊತೆಗೆ ಇತ್ತೀಚಿನ 5 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಜೊತೆಗೆ ತರುವಂತೆ ಆಯೋಜಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News