ಗ್ರಾಪಂ ಸದಸ್ಯೆಯ ಮಾನಭಂಗಕ್ಕೆ ಯತ್ನ: ಆರೋಪಿಯ ಸೆರೆ

Update: 2018-09-24 09:19 GMT

ಪುತ್ತೂರು, ಸೆ.24: ತಾಲೂಕಿನ ಬಡಗನ್ನೂರು ಗ್ರಾಮದ ಡೆಂಬಾಳೆ ಎಂಬಲ್ಲಿ ಬಡಗನ್ನೂರು ಗ್ರಾಮ ಪಂಚಾಯತ್ ಸದಸ್ಯೆ, ಆಶಾ ಕಾರ್ಯಕರ್ತೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ವೃದ್ಧನೋರ್ವನನ್ನು ಪೊಲೀಸರು ರವಿವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಪಡುವನ್ನೂತು ಗ್ರಾಮದ ಡೆಂಬಾಳೆ ನಿವಾಸಿ ಮುಹಮ್ಮದ್ ಕುಂಞಿ (68) ಬಂಧಿತ ಆರೋಪಿ. ಆರೋಪಿಯು ಸೆ.20ರಂದು ಬಡಗನ್ನೂರು ಗ್ರಾಮ ಪಂಚಾಯತ್ ಸದಸ್ಯೆಯಾದ ಆಶಾ ಕಾರ್ಯಕರ್ತೆಯೊಬ್ಬರ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿ ಪರಾರಿಯಾಗಿರುವುದಾಗಿ ಪೊಲೀಸ್ ದೂರು ದಾಖಲಿಸಲಾಗಿತ್ತು. ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಬಡಗನ್ನೂರು ಗ್ರಾಮ ಪಂಚಾಯತ್ ತುರ್ತು ಸಭೆ ನಡೆಸಿ ಆಗ್ರಹಿಸಿತ್ತು.

ರವಿವಾರ ರಾತ್ರಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಬಂಧಿಸಿ ನ್ಯಾಯಾಧೀಶದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News