ವಿಧಾನ ಪರಿಷತ್ ಉಪಚುನಾವಣೆ: ಎಂ‌.ಸಿ.ವೇಣುಗೋಪಾಲ್, ನಸೀರ್ ಅಹ್ಮದ್ ನಾಮಪತ್ರ ಸಲ್ಲಿಕೆ

Update: 2018-09-24 09:24 GMT

ಬೆಂಗಳೂರು, ಸೆ.24: ವಿಧಾನಸಭೆಯಿಂದ ನಾಮನಿರ್ದೇಶನಗೊಳ್ಳುವ ಎರಡು ವಿಧಾನಪರಿಷತ್ ಸ್ಥಾನಗಳಿಗೆ ಎಂ‌.ಸಿ.ವೇಣುಗೋಪಾಲ್ ಹಾಗೂ ನಸೀರ್ ಅಹ್ಮದ್ ಕಾಂಗ್ರೆಸ್ ನಾಯಕರೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್‌ನ ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲಾಗಿದೆ. ಅ‌.4ರಂದು ನಡೆಯಲಿರುವ ಚುನಾವಣೆಯಲ್ಲಿ ಈ ಇಬ್ಬರು ಆಯ್ಕೆಯಾಗಲಿದ್ದಾರೆ. ಬಿಜೆಪಿಯವರು 104 ಸ್ಥಾನ ಹೊಂದಿದ್ದರೂ ಅಭ್ಯರ್ಥಿ ಕಣಕ್ಕಿಳಿಸುವ ಪ್ರಯತ್ನದ ಬಗ್ಗೆ ಮಾಹಿತಿ ಇಲ್ಲ.‌ ಅವರು ಇಳಿಸಿದರೂ ನಮ್ಮ‌ ಪಕ್ಷದವರೇ ಆಯ್ಕೆಯಾಗುವುದರಲ್ಲಿ ಸಂಶಯವಿಲ್ಲ ಎಂದರು. 

ನಾಮಪತ್ರ ಸಲ್ಲಿಕೆ ವೇಳೆ ಸಚಿವರುಗಳಾದ ಡಿ.ಕೆ.ಶಿವಕುಮಾರ್, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಇತರ ಶಾಸಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News