ಸಮಾಜ ಮಂದಿರದ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ: ಶಾಸಕ ರಾಜೆಶ್ ನಾಯ್ಕ್

Update: 2018-09-24 12:00 GMT

ಬಂಟ್ವಾಳ, ಸೆ. 24: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸೋಮವಾರ ಕೊಳ್ನಾಡು ಗ್ರಾಮದ ಕಾಡುಮಠದ ಪರಿಶಿಷ್ಟ ಕಾಲೊನಿಗೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಲೊನಿ ನಿವಾಸಿಗಳ ಮೂಲಭೂತ ಸೌಕರ್ಯಗಳ ಕುಂದು-ಕೊರತೆಗಳ ಪರಿಶೀಲನೆ ನಡೆಸಿದರು. ಬಳಿಕ ಈ ಭಾಗದ ಜನರ ಬಹುಬೇಡಿಕೆಯ ಸಮಾಜ ಮಂದಿರದ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ಘೋಷಿಸಿದರು.

ಈ ಸಂದರ್ಭದಲ್ಲಿ ಕೊಳ್ನಾಡು ತಾಪಂ ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಕೊಳ್ನಾಡು ಬಿಜೆಪಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಯುವಮೊರ್ಚಾದ ಲೋಹಿತ್ ಅಗರಿ, ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ, ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಸದಾ ಶೆಟ್ಟಿ, ಬೂತ್ ಸಮಿತಿ ಅಧ್ಯಕ್ಷ ಸುಧಾಕರ ಕಾಡುಮಠ, ಹರೀಶ್ ಕಾಡುಮಠ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News