ನಡುಪದವು: ಯುವತಿ ನೇಣುಬಿಗಿದು ಆತ್ಮಹತ್ಯೆ

Update: 2018-09-24 15:04 GMT

ಕೊಣಾಜೆ,ಸೆ.24: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಕೊಣಾಜೆ ಠಾಣಾ ವ್ಯಾಪ್ತಿಯ ನಡುಪದವು ಬಳಿ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ದಾವಣಗೆರೆ ಹರಪನಹಳ್ಳಿ ಬೂಹಿಹಾಳದ ಬಸವರಾಜು ಎಂಬವರ ಪುತ್ರಿ ರೂಪ(19) ಎಂದು ಗುರುತಿಸಲಾಗಿದೆ. ಯುವತಿಯ ಚಿಕ್ಕಮ್ಮ ಶಿಕ್ಷಕಿಯಾಗಿದ್ದು ನಡುಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸೋಮವಾರಂದು ಬೆಳಗ್ಗೆ ದಾವಣಗೆರೆಯಿಂದ ಬಂದ ಈಕೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ರೂಮ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‍ನೋಟ್ ಬರೆದಿರುವ ರೂಪ ನನ್ನ ಸಾವಿಗೆ ನಾನೇ ಕಾರಣ ಎಂದು ತಿಳಿಸಿದ್ದು, ಪ್ರೇಮ ಪ್ರಕರಣವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. 

ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News