ಬೈಂದೂರು: ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

Update: 2018-09-24 15:44 GMT

ಉಡುಪಿ, ಸೆ.24: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಮಾಹಿತಿ ಹಾಗೂ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.

ತಾಲೂಕು ರೆಡ್‌ಕ್ರಾಸ್ ಸಮಿತಿ ಖಜಾಂಚಿ ಶಿವರಾಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರೆಡ್‌ಕ್ರಾಸ್ ಸಮಿತಿಯ ಸೇವಾಕಾರ್ಯ, ರಕ್ತದಾನ ಮಹತ್ವದ ಕುರಿತು ವಿವರಿಸಿದರು. ತಾಲೂಕು ರೆಡ್‌ಕ್ರಾಸ್ ಸಮಿತಿ ಸಂಯೋಜನಾಧಿಕಾರಿ ಎ.ಎಂ.ಶೆಟ್ಟಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿ. ಕೋಸ್ಟಾ ಅವರು ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎ. ಮೇಳಿ ವಹಿಸಿದ್ದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ನವೀನ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಸಹಾಯಕ ಪ್ರಾಧ್ಯಾಪಕ ಶಿವಕುಮಾರ ಪಿ.ವಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News