ಸೂಕ್ತ ಕ್ರಮಕ್ಕೆ ಪೊಲೀಸರಿಗೆ ಸೂಚನೆ: ಸಚಿವ ಯು.ಟಿ. ಖಾದರ್
Update: 2018-09-24 17:50 GMT
ಮಂಗಳೂರು, ಸೆ.24: ಮೂಡುಬಿದಿರೆ ಹಾಗೂ ಸೂರಲ್ಪಾಡಿಗಳಲ್ಲಿ ಸೋಮವಾರ ನಡೆದಿರುವ ಎರಡು ಅಹಿತಕರ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಂಡು ತಕ್ಷಣ ಅಪರಾಧಿಗಳನ್ನು ಬಂಧಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಇವುಗಳ ಹಿಂದಿರುವ ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಅಹಿತಕರ ಘಟನೆಗಳು ಮರುಕಳಿಸದಂತೆ ಪೊಲೀಸರು ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಸೂಚಿಸಿದ್ದಾರೆ.