ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Update: 2018-09-24 17:53 GMT

ಪುತ್ತೂರು,ಸೆ.24; ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಪುತ್ತೂರಿನ ನರಿಮೊಗ್ರು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿ ನಿಲಯದಲ್ಲಿ ನಡೆದಿದೆ. 

ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ತಣ್ಣೀರುಹಳ್ಳಿ ನಿವಾಸಿ ಅಣ್ಣಪ್ಪ ಅವರ ಪುತ್ರಿ ಜೀವಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 
ಇಲ್ಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿ ನಿಲಯದಲ್ಲಿ ವಾಸ್ತವ್ಯವಿದ್ದುಕೊಂಡು ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿದ್ದ ಜೀವಿತಾ ಸೋಮವಾರ ಎಂದಿನಂತೆ ನರಿಮೊಗ್ರುವಿನ ವಿದ್ಯಾರ್ಥಿನಿ ನಿಲಯದಿಂದ ಕಾಲೇಜಿಗೆ ಹೋಗಿದ್ದಳು. ಮಧ್ಯಾಹ್ನ ವೇಳೆಗೆ ಕಾಲೇಜಿನಿಂದ ವಿದ್ಯಾರ್ಥಿನಿ ನಿಲಯಕ್ಕೆ ತೆರಳಿದ್ದ ಆಕೆ ವಿದ್ಯಾರ್ಥಿನಿ ನಿಲಯದಲ್ಲಿ ತಾನು ವಾಸ್ತವ್ಯವಿದ್ದ ಕೋಣೆಯ ಪ್ಯಾನಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಧ್ಯಾಹ್ನ ಅಡುಗೆ ಸಿಬ್ಬಂದಿ ಕೋಣೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News