ರಾಮಚಂದ್ರಾಪುರ ಮಠದ ಕಟ್ಟಡ ನಿರ್ಮಾಣಕ್ಕೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
Update: 2018-09-25 17:06 GMT
ಬೆಂಗಳೂರು,ಸೆ.25: ಹೊಸನಗರ ರಾಮಚಂದ್ರಾಪುರ ಮಠದ ಗಿರಿನಗರ ಶಾಖೆಯ ಕಟ್ಟಡ ನಿರ್ಮಾಣಕ್ಕೆ ಈ ಮೊದಲು ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ಕಟ್ಟಡ ನಿರ್ಮಾಣವು ಈ ಪ್ರಕರಣದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಆದೇಶಿಸಿದೆ.
ಅಂತೆಯೇ ನ್ಯಾಯಪೀಠವು, ಎಂ.ಪವನ ಪ್ರಸಾದ್ ಹಾಗೂ ನ್ಯಾಯಾಂಗ ಹೊಣೆಗಾರಿಕಾ ಸಮಿತಿಯ ಅಧ್ಯಕ್ಷ ಎಸ್.ಶಿವಕುಮಾರ್ ಅವರನ್ನು ಪ್ರಕರಣದ ಪ್ರತಿವಾದಿ ಪಟ್ಟಿಯಿಂದ ಕೈಬಿಟ್ಟಿದೆ.
ಪ್ರಕರಣದಲ್ಲಿ ನಮ್ಮನ್ನೂ ಪ್ರತಿವಾದಿಯಾಗಿ ಸೇರ್ಪಡೆ ಮಾಡಬೇಕು ಎಂಬ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘದ ಅರ್ಜಿಯನ್ನು ತಿರಸ್ಕರಿಸಿದೆ.