ಗೂಡಿನಬಳಿ ಬಾಲಕಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯ

Update: 2018-09-25 18:32 GMT

ಬಂಟ್ವಾಳ, ಸೆ. 25: ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ನಡೆದ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ವತಿಯಿಂದ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮಂಗಳವಾರ ಮನವಿ ಅರ್ಪಿಸಲಾಯಿತು.

ಪ್ರತಿ ಶಾಲೆಗಳಲ್ಲೂ ವಾರಕ್ಕೆ ಹೆಣ್ಣುಮಕ್ಕಳಿಗೆ ಒಂದು ದಿನ ಕೌನ್ಸೆಲಿಂಗ್ ಕೇಂದ್ರ ಪ್ರಾರಂಭಿಸಿ, ಶಾಲೆಯೊಳಗೆ, ಹೊರಗಿನ ಕಿರುಕುಳಗಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಲಾಗಿದೆ. ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೆ.ಕೃಷ್ಣಪ್ಪ ಕಲ್ಲಡ್ಕ, ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಅಕ್ಷಯ್ ರಜಪೂತ್, ಸಹಸಂಚಾಲಕ ಚಂದ್ರಹಾಸ ಕನ್ಯಾನ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News