ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಾಳೆಹಣ್ಣು ಸಾಗಾಟದ ಲಾರಿ ಪಲ್ಟಿ

Update: 2018-09-26 04:56 GMT

ಬೆಳ್ತಂಗಡಿ, ಸೆ.26: ಬಾಳೆಹಣ್ಣು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಇಂದು ಬೆಳಗ್ಗೆ ಜಾವ ನಡೆದಿದೆ. ಇದರಿಂದ ಕೆಲವು ಗಂಟೆಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

 ಚಾರ್ಮಾಡಿ ಘಾಟಿಯ ರಸ್ತೆಗಳಲ್ಲಿ ಭಾರೀ ಗಾತ್ರದ ಹೊಂಡಗುಂಡಿಗಳು ಉಂಟಾಗಿವೆ. ಈ ಗುಂಡಿಗಳಿಂದಾಗಿ ವಾಹನಗಳು ಮಗುಚಿ ಬೀಳುವುದು ಆಗಾಗ ಸಂ
ಭವಿಸುತ್ತಿದೆ ಇಂದು ಬೆಳಗ್ಗೆ ಲಾರಿ ಉರುಳಿ ಬಿದ್ದ ಹಿನ್ನೆಲೆಯಲ್ಲಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.

ಈ ಬಗ್ಗೆ ಮಾಹಿತಿ ಪಡೆದು ಚಾರ್ಮಾಡಿ ಹಸನಬ್ಬ ನೇತೃತ್ವದಲ್ಲಿ ಸ್ಥಳೀಯರು ಸೇರಿ ಲಾರಿಯನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News