ಹೊಸದಿಲ್ಲಿ: ಮೂರಂತಸ್ತಿನ ಕಟ್ಟಡ ಕುಸಿತ: ಐವರು ಬಲಿ

Update: 2018-09-26 08:20 GMT

ಹೊಸದಿಲ್ಲಿ, ಸೆ.26: ವಾಯುವ್ಯ ದಿಲ್ಲಿಯ ಅಶೋಕ್ ವಿಹಾರದಲ್ಲಿರುವ ಮೂರು ಅಂತಸ್ತಿನ ಕಟ್ಟಡ ಬುಧವಾರ ಬೆಳಗ್ಗೆ ಕುಸಿದುಬಿದ್ದಿದ್ದು ಘಟನೆಯಲ್ಲಿ ನಾಲ್ಕು ಮಕ್ಕಳು ಹಾಗೂ ಓರ್ವ ಮಹಿಳೆ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರ.

ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರುವ 8 ಜನರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳಡಿ ಕನಿಷ್ಠ 30 ಮಂದಿ ಸಿಲುಕಿಕೊಂಡಿರುವ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ.

ಬುಧವಾರ ಬೆಳಗ್ಗೆ 9.25ರ ಸುಮಾರಿಗೆ ಅಶೋಕ್ ವಿಹಾರ್‌ನ ಮೂರನೇ ಹಂತದ ಸಾವನ್ ಪಾರ್ಕ್ ಬಳಿ ಇರುವ ಕಟ್ಟಡ ಕುಸಿದು ಬಿದ್ದಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಆರು ವಾಹನಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್‌ಡಿಆರ್‌ಎಫ್) ಎರಡು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News