ರಮ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ ಉತ್ತರ ಪ್ರದೇಶ ಪೊಲೀಸರು

Update: 2018-09-26 10:37 GMT

ಪಾಟ್ನಾ, ಸೆ.26: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೋಟೋ ಒಂದನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥೆ, ನಟಿ ಹಾಗೂ ಮಾಜಿ ಸಂಸದೆ ರಮ್ಯ (ದಿವ್ಯ ಸ್ಪಂದನ) ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಲಕ್ನೋ ಮೂಲದ ವಕೀಲ ಸೈಯದ್ ರಿಝ್ವಾನ್ ಅಹ್ಮದ್ ಎಂಬವರು ಗೋಮತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಮೇಣದ ಪ್ರತಿಮೆಯ ಮೇಲೆ ಚೋರ್ ಎಂದು ಪೈಂಟ್ ಮಾಡುತ್ತಿರುವ ಫೋಟೋಶಾಪ್ ಮಾಡಲ್ಪಟ್ಟ ಚಿತ್ರವನ್ನು ಸೋಮವಾರ ರಮ್ಯ ಪೋಸ್ಟ್ ಮಾಡಿದ್ದರು. ರಮ್ಯ ವಿರುದ್ಧ ಐಟಿ ಕಾಯ್ದೆ ಸೆಕ್ಷನ್ 67 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124(ಎ) (ದೇಶದ್ರೋಹ) ಅನ್ವಯ ಪ್ರಕರಣ ದಾಖಲಿಸಲಾಗಿದೆ.

ದೂರುದಾರ ಅಹ್ಮದ್ ಎಫ್‍ಐಆರ್ ನ ಫೋಟೋ ಪ್ರಕಟಿಸಿ ಮೋದಿಯವರ ಕಾನೂನು ತಂಡ ಇನ್ನಷ್ಟು ಎಚ್ಚರಿಕೆಯಿಂದಿರಬೇಕು ಎಂಬ ಸಲಹೆ ನೀಡಿದ್ದಾರೆ. ಬಿಜೆಪಿ ಕೂಡ ದೂರು ನೀಡಬೇಕೆಂದು ಅವರು ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News