ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭದ್ರತಾ ಸಿಬ್ಬಂದಿಗಳಿಬ್ಬರ ಕೊಲೆ

Update: 2018-09-26 12:36 GMT

ಬೆಂಗಳೂರು, ಸೆ.26: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭದ್ರತಾ ಸಿಬ್ಬಂದಿಗಳಿಬ್ಬರನ್ನು ಕೊಲೆಗೈದಿರುವ ಘಟನೆ ಇಲ್ಲಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಸ್ಸಾಂ ಮೂಲದ ವಿಕ್ರಂ(25) ಮತ್ತು ಸೈದುಲ್ಲಾ(26) ಕೊಲೆಯಾದ ಭದ್ರತಾ ಸಿಬ್ಬಂದಿ ಎಂದು ತಿಳಿದುಬಂದಿದೆ.

ದೊಡ್ಡಕಮ್ಮನಹಳ್ಳಿಯ ತೇಜಸ್ವಿನಿ ನಗರದ ಬಳಿ 18 ಎಕರೆ ವಿಸ್ತೀರ್ಣ ಹೊಂದಿರುವ ಸಿಟಿವಿಲ್ಲಾದಲ್ಲಿ ಮನೆಗಳು ನಿರ್ಮಾಣವಾಗುತ್ತಿದ್ದು, ವಿಕ್ರಂ, ಸೈದುಲ್ಲಾ ಸೇರಿ ಮೂವರು ಭದ್ರತಾ ಸಿಬ್ಬಂದಿ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲ್ಲಿನ ಕೊಠಡಿಯೊಂದರಲ್ಲಿ ಈ ಮೂವರು ಸೆಕ್ಯೂರಿಟಿ ಗಾರ್ಡ್‌ಗಳು ಉಳಿದುಕೊಳ್ಳುತ್ತಿದ್ದರು.

ಮಂಗಳವಾರ ರಾತ್ರಿ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಬುಧವಾರ ಬೆಳಗ್ಗೆ ಕೆಲಸಕ್ಕೆ ಬಂದ ಕೆಲಸಗಾರರು ಸೆಕ್ಯೂರಿಟಿ ಗಾರ್ಡ್ ಕೊಠಡಿಯ ಬಳಿ ರಕ್ತ ಕಂಡು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News