ಅ.3: ಸರಕಾರಿ ನೌಕರರಿಂದ ರಕ್ತದಾನ ಶಿಬಿರ

Update: 2018-09-26 14:54 GMT

ಕುಂದಾಪುರ, ಸೆ. 26: ಕುಂದಾಪುರ ರಾಜ್ಯ ಸರಕಾರಿ ನೌಕರರ ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ ಅ.3ರಂದು ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನ ಕೋಯಾಕುಟ್ಟಿ ಹಾಲ್‌ನಲ್ಲಿ ನಡೆಯಲಿದೆ.

2006ರ ನಂತರ ರಾಜ್ಯ ಸರಕಾರಿ ಸೇವೆಗೆ ಸೇರಿದ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಕೈಬಿಟ್ಟು ನೂತನ ಪಿಂಚಣಿ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದ ನಂತರ ಸರಕಾರಿ ನೌಕರರು ಎನ್‌ಪಿಎಸ್ ವಿರುದ್ಧ ಸಂಘಟನೆಯನ್ನು ಕಟ್ಟಿಕೊಂಡು ಹೋರಾಡುತಿದ್ದು, ಅದರ ಭಾಗವಾಗಿ ‘ರಕ್ತ ಕೊಟ್ಟೇವು ಪಿಂಚಣಿ ಬಿಡೇವು’ ಎನ್ನುವ ಘೋಷಣೆಯೊಂದಿಗೆ ಈ ರಕ್ತದಾನ ಶಿಬಿರವನ್ನು ಆಯೋಜಿಸಿದ್ದಾರೆ.

ಶಿಬಿರವನ್ನು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಇದರಲ್ಲಿ ಕುಂದಾಪುರ ತಾಲೂಕು ಘಟಕದ ಎಲ್ಲಾ ಎನ್‌ಪಿಎಸ್ ನೌಕರರು ಭಾಗವಹಿಸಬೇಕೆಂದು ತಾಲೂಕು ಘಟಕದ ಅಧ್ಯಕ್ಷ ಹರೀಶ್‌ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News