ಮಂಡ್ಯ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Update: 2018-09-27 17:54 GMT
ಮಂಡ್ಯ, ಸೆ.27: ಸಾಲಬಾಧೆ ತಾಳಲಾರದೆ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.
ದಿವಗಂತ ಚಿಕ್ಕೋನು ಗೌರಮ್ಮ ದಂಪತಿ ಪುತ್ರ ಕುಮಾರ್(38) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಇವರಿಗೆ 2 ಎಕರೆ ಜಮೀನಿದ್ದು, 1 ಎಕರೆಯಲ್ಲಿ ರೇಷ್ಮೆ ಮತ್ತು 1 ಎಕರೆಯಲ್ಲಿ ಭತ್ತ ಕೃಷಿ ನಡೆಸಿದ್ದರು ಎನ್ನಲಾಗಿದೆ.
ಸೋಮನಹಳ್ಳಿಯ ಸಿಂಡಿಕೇಟ್ ಬ್ಯಾಂಕ್ನಲ್ಲಿ ಜಮೀನು ಮತ್ತು ಚಿನ್ನಾಭರಣ ಅಡಮಾನವಿಟ್ಟು 2.50 ಲಕ್ಷ ರೂ., ಸೋಮನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 50 ಸಾವಿರ ರೂ. ಹಾಗೂ 3 ಲಕ್ಷ ಕೈಸಾಲ ಮಾಡಿಕೊಂಡಿದ್ದು, ಬ್ಯಾಂಕ್ ನೊಟೀಸ್ ಬಂದಿತ್ತು ಎಂದು ತಿಳಿದು ಬಂದಿದೆ.
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಸರಕಾರದಿಂದ ಪರಿಹಾರ ಕೊಡಿಸಿವ ಭರವಸೆ ನೀಡಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.