ಗೈರು ಹಾಜರಿ ಹಿನ್ನೆಲೆಯಲ್ಲಿ ಶಾಸಕ ರೋಷನ್‌ ಬೇಗ್‌ಗೆ ನೋಟಿಸ್: ದಿನೇಶ್ ಗುಂಡೂರಾವ್

Update: 2018-09-28 14:01 GMT

ಬೆಂಗಳೂರು, ಸೆ. 28: ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಗೈರು ಹಾಜರಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್.ರೋಷನ್ ಬೇಗ್ ಹಾಗೂ ಇಬ್ಬರು ಬಿಬಿಎಂಪಿ ಕಾರ್ಪೋರೇಟರ್‌ಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಪ್ ಜಾರಿ ಮಾಡಿದ್ದರೂ ಗೈರು ಹಾಜರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಅವರು ಉತ್ತರಿಸಲು ಕಾಲಾವಕಾಶ ನೀಡಲಾಗಿದೆ. ಅವರಿಂದ ಉತ್ತರ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಹಾಗೂ ವಿಪಕ್ಷ ಬಿಜೆಪಿ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿದ್ದ ಬಿಬಿಎಂಪಿ ಮೇಯರ್ ಚುನಾವಣೆಗೆ ಶಾಸಕ ರೋಷನ್‌ಬೇಗ್, ಬಿಬಿಎಂಪಿ ಕಾರ್ಪೋರೇಟರ್‌ಗಳಾದ ಆಶಾ ಸುರೇಶ್ ಹಾಗೂ ಲಲಿತಾ ತಿಮ್ಮನಂಜಯ್ಯ ಗೈರಾಗಿದ್ದು ನೋಟಿಸ್ ನೀಡಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News