ಮನಪಾದಿಂದ ಪೂವಮ್ಮರಿಗೆ ಸನ್ಮಾನ
Update: 2018-09-29 06:49 GMT
ಮಂಗಳೂರು, ಸೆ.29: ಇತ್ತೀಚೆಗೆ ನಡೆದ ಏಷ್ಯಾಡ್ನಲ್ಲಿ ಚಿನ್ನದ ಪದಕ ಜಯಿಸಿದ ಪೂವಮ್ಮರಿಗೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಇಂದು ಸನ್ಮಾನಿಸಲಾಯಿತು.
ಇಂದು ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಆರಂಭದಲ್ಲಿ ಪೊವಮ್ಮರನ್ನು ಎರಡು ಲಕ್ಷ ರೂ.ನ ಚೆಕ್ ನೀಡಿ ಪೇಟಾ ತೊಡಿಸಿ, ಶಾಲು ಹೊದಿಸಿ ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಯಿತು.
ಈ ಸಂದರ್ಭ ಮೇಯರ್ ಭಾಸ್ಕರ ಮೊಯ್ಲಿ, ಉಪ ಮೇಯರ್ ಮುಹಮ್ಮದ್ ಕೆ., ಮಾಜಿ ಮೇಯರ್ ಮಹಾಬಲ ಮಾರ್ಲ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.