ಕಾಶ್ಮೀರದಲ್ಲಿ ಯೋಧ ಆತ್ಮಹತ್ಯೆ
Update: 2018-09-30 14:07 GMT
ಜಮ್ಮು, ಸೆ.30: ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಸ್ಎಫ್ನ 126ನೇ ಬೆಟಾಲಿಯನ್ನಲ್ಲಿ ಕರ್ತವ್ಯಕ್ಕೆ ನಿಯೋಜಿತನಾಗಿದ್ದ ಹೆಡ್ಕಾನ್ಸ್ಟೇಬಲ್ ರಾಮಚರಣ್ ಎಂಬವರು ಶನಿವಾರ ರಾತ್ರಿ ಸುಂದರ್ಬನಿ ಎಂಬಲ್ಲಿರುವ ಸೇನಾಶಿಬಿರದ ಒಳಗೆ ತನ್ನ ಕುತ್ತಿಗೆಗೆ ಗಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಗುಂಡಿನ ಶಬ್ದ ಕೇಳಿ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.